ಕಿರಾಣಿ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ.ನಷ್ಟ

ಕುಂದಾಪುರ : ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ಬುಧವಾರ ಬೆಂಕಿ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಚಂದ್ರಶೇಖರ್ ಎಂಬವರಿಗೆ ಸೇರಿದ ಅಂಗಡಿಯಾಗಿದೆ.

ಮಾಲಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪ ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿದ್ದರು. ಕೆಲವೇ ನಿಮಿಷಗಳಲ್ಲಿ ಮರಳಿ ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯೊಳಗಿದ್ದ ಹೊಸ ಫ್ರಿಜ್, ಕಪಾಟು, ಶೋಕೇಸ್ ಮುಂತಾದ ಉಪಕರಣಗಳು, ಕಿರಾಣಿ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿವೆ. ಘಟನೆಯಲ್ಲಿ ಅಂದಾಜು 4 ಲಕ್ಷ ರೂ.ನಷ್ಟ ಸಂಭವಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ