ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ : ಪ್ರಯಾಣಿಕರು ಬಚಾವ್

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್‌ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದೆ.

ಉಡುಪಿ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು. ಬಸ್ಸಿನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ