ಬೋಟ್‌ನಲ್ಲೇ ಕುಸಿದು ಬಿದ್ದು ಮೀನುಗಾರ ಮೃತ್ಯು

ಕೋಟ : ಮೀನಗಾರನೋರ್ವ ಬೋಟಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆ (ಬಂದರ್)ನಲ್ಲಿ ನಡೆದಿದೆ.
ಮೃತರನ್ನು ಗೋಪಾಡಿ ಗ್ರಾಮದ ಗೋವಿಂದ (62) ಎಂದು ಗುರುತಿಸಲಾಗಿದೆ.

ಗೋವಿಂದ ಅವರು ಚಾಮುಂಡೇಶ್ವರಿ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದು 15 ದಿನಗಳಿಗೊಮ್ಮೆ ರಜೆಯಲ್ಲಿ ಮನೆಗೆ ಹೋಗಿ ಬರುತ್ತಿದ್ದರು. ಮಂಗಳವಾರ ಮುಂಜಾನೆ ಮೀನು ಹಿಡಿಯಲು ತೆರಳಲು ತಯಾರಿ ಸಲುವಾಗಿ ಬಲೆ ಸರಿ ಮಾಡುತ್ತಿರುವಾಗ ಬೋಟ್ ಒಳಗಡೆ ಕುಸಿದುಬಿದ್ದಾಗ ಸಹ ಕೆಲಸಗಾರರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ