ಮೀನುಗಾರಿಕಾ ದೋಣಿ ಪಲ್ಟಿ : ನಾಲ್ವರ ಮೀನುಗಾರರ ರಕ್ಷಣೆ

ಕಾರವಾರ : ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ.

ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗಾಗಿ ತೆರಳಿದ್ದರು. ಸಮದ್ರದಲ್ಲಿ ಹಠಾತ್ತಾಗಿ ಬೀಸಿದ ಪ್ರಬಲ ಗಾಳಿ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿಯಾಗಿ ನಾಲ್ವರು ಮುಳುಗಡೆಯಾಗುತ್ತಿದ್ದರು.

ಈ ವೇಳೆ ಅಲ್ಲೆ ಹತ್ತಿರದಲ್ಲಿ ಬರುತ್ತಿದ್ದ ಮಂಗಳೂರು ಮೂಲದ ಒಸಿಯನ್ ಬ್ಲೂ ಹೆಸರಿನ ಬೋಟ್‌ನಲ್ಲಿದ್ದ ಮೀನುಗಾರರು ಜೀವರಕ್ಷಕ ಸಾಧನಗಳಾದ ರಬ್ಬರ್ ಟೂಬ್ ಎಸೆದು ಮಳುಗಡೆಯಾಗುತ್ತಿದ್ದ ಮೀನುಗಾರರನ್ನ ರಕ್ಷಣೆ ಮಾಡಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ