ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ಬಿ ಕೆ ಕೃಷ್ಣಪ್ಪ ನಿಧನ

ಮಂಗಳೂರು : ಭಾರತ ಕಮ್ಯೂನಿಸ್ಟ್‌ನ ಮಾಜಿ ಜಿಲ್ಲಾ ಕಾರ್ಯದರ್ಶಿ, ಪಕ್ಷದ ರಾಜ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿದ್ದ ಬಿ.ಕೆ.ಕೃಷ್ಣಪ್ಪ ರವರು ಮಂಗಳವಾರ ರಾತ್ರಿ 8 ಗಂಟೆಗೆ ಅವರ ಸ್ವಗೃಹ‌ದಲ್ಲಿ ನಿಧನರಾದರು.

ಅವರು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ‌ಯಾಗಿ, ಮುನಿಸಿಪಾಲ್ ಯೂನಿಯನ್‌ನ ಮುಖಂಡರಾಗಿ ಹಲವಾರು ವರ್ಷಗಳ ಕಾಲ ದುಡಿದಿರುತ್ತಾರೆ. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಪಂಜಿಮೊಗರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ತನ್ನ ಅನುಭವಯುಕ್ತ ಭಾಷಣದ ಮೂಲಕ ಜನರನ್ನು ಆಕರ್ಷಿಸುವ ಸಾಮರ್ಥ್ಯ ಹೊಂದಿದ್ದರು. ಇವರ ನಿಧನದಿಂದ ಪಕ್ಷ‌ಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ನಿಧನಕ್ಕೆ ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಪಕ್ಷದ ಮಾಜೀ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ವಿ.ರಾವ್, ಕಾರ್ಯದರ್ಶಿ ವಿ.ಎಸ್ ಬೇರಿಂಜ, ಆರ್ ಡಿ ಸೋನ್ಸ್, ಪ್ರಭಾಕರ ರಾವ್, ಎಂ.ಕರುಣಾಕರ, ಸುರೇಶ್ ಕುಮಾರ್, ಜಗತ್ ಪಾಲ್ ಕೋಡಿಕಲ್ ಸಂತಾಪ ಸೂಚಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್