ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ – ಪ್ರಕರಣ ದಾಖಲು

ಕಾಪು : ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

ಗ್ರಾಹಕರಾದ ರಿಯಾನತ್ ಬಾನು ಹಾಗೂ ಆಕೆಯ ಪತಿ ನೂಮನ್ ಇಸ್ಮಾಯಿಲ್ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು ಸಹಕಾರಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು. ಅವರಿಗೆ ದಿನೇಶ್ ಮತ್ತು ರಾಜೇಶ್ ಜಾಮೀನುದಾರರಾಗಿದ್ದರು.

ಸಾಲ ಪಡೆದ ಆರೋಪಿಗಳು ಮೂರು ತಿಂಗಳ ಮಾಸಿಕ ಕಂತನ್ನು ಸಂಘಕ್ಕೆ ಪಾವತಿಸಿದ್ದು ಅನಂತರದ ಕಂತನ್ನು ಪಾವತಿ ಮಾಡದೇ ಬಾಕಿಯಿರಿಸಿಕೊಂಡಿದ್ದರು.

ಸಂಘದವರಿಗೆ ಆರೋಪಿಗಳ ಮೇಲೆ ಅನುಮಾನ ಬಂದು ಅವರು ನೀಡಿರುವ ದಾಖಲೆಗಳನ್ನು ಸಂಬಂಧಪಟ್ಟ ಸರಕಾರಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದಾಗ, ಆರೋಪಿಗಳು ಸಾಲ ತೆಗೆದುಕೊಳ್ಳುವ ಉದ್ದೇಶಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸಂಘದ ಶಾಖಾ ಪ್ರಧಾನ ವ್ಯವಸ್ಥಾಪಕ ನೀಡಿದ ದೂರಿನಂತೆ ನಾಲ್ಕು ಮಂದಿ ಆರೋಪಿಗಳ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ