ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್‌ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಇವರಿಬ್ಬರ ಮೇಲಿನ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅವರಿಗೆ ಎನ್‌.ಡಿ.ಪಿ.ಎಸ್‌. ಕಾಯ್ದೆಯ ಅಡಿಯಲ್ಲಿ ತಲಾ ರೂ.10,000 ದಂಡ ವಿಧಿಸಲಾಗಿದೆ.

ದಂಡ ತೆರಲು ತಪ್ಪಿದ್ದಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್‌.ಸಿ.ಬಿ ಮೋಹನ್‌ ಬಾಬು ಅವರು ಆದೇಶ ಮಾಡಿರುತ್ತಾರೆ. ಈ ಪ್ರಕರಣವನ್ನು ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ