ಉಡುಪಿಯ ಕಂಡೀರಾ… ಹುಲಿವೇಷಧಾರಿಗಳಿಗೆ ನೋಟಿನ ಮಾಲೆಯ ಕಂಡೀರಾ….

ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ ನೆರವೇರಲಿವೆ. ರಥಬೀದಿಯಲ್ಲಿ ಆಗಸ್ಟ್ 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ.

ಕೃಷ್ಣ ಪ್ರಸಾದಕ್ಕೆ ಅಗತ್ಯ ಇರುವ ಉಂಡೆ, ಚಕ್ಕುಲಿ ತಯಾರಿಸಲಾಗುತ್ತಿದೆ. ಇನ್ನು ಅಷ್ಠಮಿಯಂದು ಉಡುಪಿಯಲ್ಲಿ ಹುಲಿ ವೇಷಧಾರಿಗಳು ಊರಿನಲ್ಲೆಡೆ ಸಂಚರಿಸಿ ಹುಲಿ ಕುಣಿತ ನಡೆಸುತ್ತಾರೆ. ಕರಾವಳಿಯ ಪ್ರಸಿದ್ಧ ಹುಲಿ ಕುಣಿತಪ್ರಾರಂಭಗೊಳ್ಳುವುದೇ ಅಷ್ಠಮಿಯಂದು. ಅಷ್ಠಮಿಯ ದಿವಸ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಬಳಿಕ ರಥ ಬೀದಿಯಲ್ಲಿ ಮತ್ತು ನಗರದಲ್ಲೆಡೆ ಸಂಚಾರ ಮಾಡಿ ಹುಲಿ ವೇಷಧಾರಿಗಳು ಜನರನ್ನು ರಂಜಿಸುತ್ತಾರೆ‌. ಅಷ್ಟಮಿಯ ದಿವಸ ಶಿರೂರು ಮಠದಲ್ಲಿ ಹುಲಿ ವೇಷಧಾರಿಗಳಿಗೆ ನೋಟಿನ ಮಾಲೆಗಳನ್ನು ಸಿದ್ಧಪಡಿಸಲಾಗುತ್ತದೆ. ಈಗಾಗಲೇ ಶಿರೂರು ಮಠದಲ್ಲಿ ಸಾವಿರಾರು ರೂಪಾಯಿಗಳ ನೋಟಿನ ಮಾಲೆ ಸಿದ್ದಗೊಂಡಿದ್ದು ಅಷ್ಟಮಿಯ ದಿವಸ ಇದನ್ನು ಹುಲಿ ವೇಷಧಾರಿಗಳಿಗೆ ಹಂಚಲಾಗುತ್ತದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ