ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಹಗ್ಗ ಸುತ್ತಿ ಬಾಲಕಿ ಮೃತ್ಯು..

ವಿಟ್ಲ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರ ಭಾನುವಾರ ಸಂಜೆ ವೇಳೆ ನಡೆದಿದೆ.

ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ.

ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ, ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ. ಈ ಕುರಿತು ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ