ಅರ್ಧ ಗಂಟೆಯ ಗೂಳಿಕಾಳಗ – ಬೆಚ್ಚಿ ಬಿದ್ದ ಜನ, ರೋಮಾಂಚನ…

ಗಂಗೊಳ್ಳಿ : ಮದವೇರಿದ ಎರಡು ಗೂಳಿಗಳ ಕಾಳಗ ಗ್ರಾಮಸ್ಥರನ್ನು ಬೆಚ್ಚಿ ಬೆಳಿಸುವಂತೆ ಮಾಡಿತು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಈ ಘಟನೆ ನಡೆದಿದ್ದು, ಕೆಲ ಕಾಲ ಜನರು ಆತಂಕಗೊಂಡರು. ಎರಡು ಗೂಳಿಗಳು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಾಡಿಕೊಂಡ ಪರಿಣಾಮ ಗಂಗೊಳ್ಳಿಯ ಮ್ಯಾಂಗನೀಸ್‌ ರಸ್ತೆ ಸಮೀಪ ಮುಖ್ಯ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳು ಭಯಭೀತರಾದರು. ಈ ಗೂಳಿ ಕಾಳಗ ನೋಡುತ್ತಾ ಜನರು ರಸ್ತೆ ಬದಿಯಲ್ಲಿ ನಿಲ್ಲುವಂತಾಯಿತು.

ಬಳಿಕ ಪಂಪ್‌ಸೆಟ್‌ ಮೂಲಕ ನೀರು ಹಾಯಿಸಿ, ಪಟಾಕಿ ಸಿಡಿಸಿ ಗೂಳಿ ಕಾಳಗವನ್ನು ತಪ್ಪಿಸಲು ಸ್ಥಳೀಯರು ಹರಸಾಹಸಪಟ್ಟರು.
ಇಷ್ಟಾದರೂ ಅವುಗಳನ್ನು ಬೇರ್ಪಡಿಸಲು ಸಾಧ್ಯವಾಗಲಿಲ್ಲ. ಸುಮಾರು ಅರ್ಧ ಗಂಟೆ ಬಳಿಕ ಒಂದು ಗೂಳಿ ಓಡಿ ಹೋಯಿತು. ಬಳಿಕ ಮತ್ತೊಂದು ಗೂಳಿ ಶಾಂತವಾಯಿತು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ