ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಬ್ರಹ್ಮಾವರ : ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದ ಇವರು ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬೆಳೆದರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು

ಯಕ್ಷಶಿಕ್ಷಣ ಟ್ರಸ್ಟ್‌‌ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್‌ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ