ನವವಿವಾಹಿತೆಗೆ ಕಿರುಕುಳ; ಪತಿಯ ಮನೆಯವರ ವಿರುದ್ಧ ದೂರು ದಾಖಲು

ಪಡುಬಿದ್ರಿ : ನವವಿವಾಹಿತೆ ಮೂಳೂರಿನ ಅಫಂತ್‌(25) ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದು ಮನೆ ಬಿಟ್ಟು ತೆರಳುವಂತೆ ಹೀನಾಯವಾಗಿ ವರ್ತಿಸಿದ ಪತಿಯ ಮನೆಯವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾವ ಇಬ್ರಾಹಿಂ, ಅತ್ತೆ ನಫೀಸಾ, ಬಾವ ಮಹಮ್ಮದ್‌ ಶಂಶೀರ್‌, ಅತ್ತಿಗೆ ಸಾಯಿರಾಬಾನು ವಿರುದ್ಧ ಅಫಂತ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನಾ ಗ್ರಾಮದ ಅಹಮ್ಮದ್‌ ಸಮೀರ್‌ ಅವರನ್ನು ಪ್ರೇಮಿಸಿ ಎರಡೂ ಮನೆಯವರ ಒಪ್ಪಿಗೆಯೊಂದಿಗೆ ಅಕ್ಟೋಬರ್ 13ರಂದು ಕಾರ್ಕಳದಲ್ಲಿ ನಡೆದಿದ್ದ ಮದುವೆಯ ಬಳಿಕ ಇನ್ನಾ ಗ್ರಾಮದ ಕಡೆಕುಂಜದ ಪತಿಯ ಮನೆಯಲ್ಲಿ ಅಫಂತ್‌ ವಾಸವಿದ್ದರು. ನವೆಂಬರ್ 10ರಂದು ನಡೆದಿದ್ದ ಹಲ್ಲೆ ಬಳಿಕ ಮೂಳೂರಿನ ತನ್ನ ಮನೆಯಲ್ಲಿ ಫಿನಾಯಿಲ್‌ ಸೇವಿಸಿ ಅಸ್ವಸ್ಥಗೊಂಡಿದ್ದರು. ಆ ಬಳಿಕ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಇದೀಗ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ