ಶಿರಾಡಿ ಘಾಟ್‌ನಲ್ಲಿ ರಾಜಹಂಸ‌ – ಐರಾವತ ಬಸ್ಸುಗಳ ಮುಖಾಮುಖಿ ಡಿಕ್ಕಿ‌; ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ

ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ.

ರಾಜಹಂಸ‌ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ ಬಿದ್ದಿದೆ. ಈ ಅಪಘಾತದಲ್ಲಿ ಎರಡೂ ಬಸ್ಸುಗಳ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ಕೆಲಹೊತ್ತು ಸಂಚಾರ ಸ್ಥಗಿತಗೊಂಡಿದ್ದು, ಬಳಿಕ ಕಾರ್ಯಾಚರಣೆ ನಡೆಸಿ ಅಪಘಾತ ನಡೆದ ಬಸ್ಸುಗಳನ್ನು ತೆರವುಗೊಳಿಸಲಾಗಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!