ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಉಡುಪಿ : ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ.

ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಬಳಿಕ ಆಸುಪಾಸಿಗೂ ವ್ಯಾಪಿಸಿದೆ. ಭಾರೀ ಹೊಗೆಯಿಂದ ಈ ಪ್ರದೇಶ ಆವರಿಸಿಕೊಂಡಿದ್ದು
ಅಕ್ಕ ಪಕ್ಕದ ಮನೆಯವರನ್ನು ಅಗ್ನಿಶಾಮಕ ಸಿಬ್ಬಂದಿ ತೆರವು ಮಾಡಿದರು. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದ್ದು ಗುಜರಿ ಅಂಗಡಿಯಾದ ಕಾರಣ ಗೋಡೌನ್‌ನಲ್ಲಿ ಬೇಗ ಉರಿಯುವ ಎಣ್ಣೆಯಂತಹ ಸಾಮಗ್ರಿ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಭಾರೀ ಪ್ರಮಾಣದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

Related posts

ಪೆರ್ಡೂರಿನಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮೀನ ಸಂಕ್ರಮಣದಂದು ನಡೆದ ಕೆರೆದೀಪ, ಗರುಡವಾಹನ, ಕಟ್ಟೆಪೂಜೆ ಸಂಭ್ರಮ

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ