ಹೋಳಿ ಹುಣ್ಣಿಮೆ – ಕೃಷ್ಣಮಠದಲ್ಲಿ ವಿಶೇಷ ಪೂಜೆ

ಉಡುಪಿ : ಹೋಳಿಹುಣ್ಣಿಮೆಯ ದಿನವಾದ ನಿನ್ನೆ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ ಸಂಪನ್ನಗೊಂಡಿತು.

ಸಂಪ್ರದಾಯದಂತೆ ಶ್ರೀಕೃಷ್ಣಮಠದ ಚಂದ್ರಶಾಲೆಯಲ್ಲಿ ಪರ್ಯಾಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಿತು. ಬಳಿಕ ವಾದ್ಯ, ಬಿರುದಾವಲಿಗಳೊಂದಿಗೆ ಕಡಿಯಾಳಿಗೆ ಹೋಗಿ ಹಣ್ಣುಕಾಯಿ ನೈವೇದ್ಯ ಮಾಡಿಸಿ ಬಣ್ಣ ಸಮರ್ಪಣೆ ಮಾಡಲಾಯಿತು. ಬಳಿಕ ಪ್ರಸಾದವನ್ನು ಪರ್ಯಾಯ ಶ್ರೀಗಳಿಗೆ ಸಮರ್ಪಿಸಲಾಯಿತು.

ಈ ಸಂದರ್ಭ ಮಠದ ಭಾಗವತರು, ದಿವಾನರು, ಪುರೋಹಿತರು, ಪಾರ್ಪತ್ಯೆಗಾರರು ಉಪಸ್ಥಿತರಿದ್ದರು.

Related posts

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ