ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

ಉಡುಪಿ : ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ.

ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಜೊತೆಗೆ ಮಾನಸಿಕ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ.

ಸಂಬಂಧಿಕರು ಪತ್ತೆಯಾಗದ ಕಾರಣ ಯುವಕ ಬೀದಿ ಪಾಲಾಗಿ ಬದುಕು ಸಂಕಷ್ಟಕ್ಕೀಡಾಗಲಿದೆ ಎಂದು ಅರಿತ ಸಮಾಜ ಸೇವಕ ವಿಶು ಶೆಟ್ಟಿ ಅವರು, ಹೊಸಬೆಳಕು ಆಶ್ರಮದ ಮುಖ್ಯಸ್ಥೆ ತನುಲಾ ಅವರನ್ನು ಸಂಪರ್ಕಿಸಿ, ಯುವಕನಿಗೆ ಆಶ್ರಯ ನೀಡುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದನೆ ದೊರೆತ ಹಿನ್ನಲೆಯಲ್ಲಿ ಯುವಕನನ್ನು ಆಂಬುಲೆನ್ಸ್ ಮೂಲಕ ಆಶ್ರಮಕ್ಕೆ ಕರೆದೊಯ್ದು ದಾಖಲಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಉದ್ಯಾವರ ರಾಮದಾಸ್ ಪಾಲನ್ ನೆರವಾದರು.

ಯುವಕನ ವಾರೀಸುದಾರರು ಇದ್ದಲ್ಲಿ ಹೊಸಬೆಳಕು ಆಶ್ರಮ (ದೂ.ಸಂಖ್ಯೆ 6364777100)ವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ