ಮಾರ್ಚ್ 4 ಮತ್ತು 5ರಂದು ಬಿಸಿಯೂಟ ನೌಕರರ ಅಹೋರಾತ್ರಿ ಹೋರಾಟ

ಉಡುಪಿ : ರಾಜ್ಯ ಸರಕಾರ ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಇದೇ ಮಾರ್ಚ್ 4 ಮತ್ತು 5ರಂದು ರಾಜ್ಯಾದ್ಯಂತ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಸಿಯೂಟ ನೌಕರರು ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕಾಗಿ ಸರಕಾರವನ್ನು ಒತ್ತಾಯಿಸುತಿದ್ದರೂ ಈವರೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಮಾರ್ಚ್ 4 ಮತ್ತು 5ರಂದು ಬಿಸಿಯೂಟ ನೌಕರರ ರಾಜ್ಯ ಮಟ್ಟದ ಅಹೋರಾತ್ರಿ ಹೋರಾಟಕ್ಕೆ ನಿಶ್ಚಯಿಸಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ತಿಳಿಸಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ