ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ ಬ್ಯಾಂಕ್ ಲೇಔಟ್ ನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣ”ದಲ್ಲಿ ನಡೆಯಲಿದೆ.

ಶರತ್ ಶೆಟ್ಟಿ ನೇತೃತ್ವದ ತುಳುನಾಡಿನ ಖ್ಯಾತ ರಂಗಭೂಮಿ ಸಂಸ್ಥೆ “ವಿಜಯ ಕಲಾವಿದರು ಕಿನ್ನಿಗೋಳಿ” ಇವರ 25ನೇ ವಾರ್ಷಿಕ ಸಂಭ್ರಮಾರ್ಥವಾಗಿ ತುಳು ಹಾಸ್ಯಮಯ ಸಾಮಾಜಿಕ ನಾಟಕ “ತೊಟ್ಟಿಲ್” ಪ್ರದರ್ಶನವಿದೆ.

“ಐ-ಲೇಸಾ ದಿ ವಾಯ್ಸ್ ಆಫ್ ಓಷ್ಯನ್(ರಿ)” ನಿರ್ಮಾಣದ ಹೊಸ ತುಳು ಭಾವಗೀತೆಗಳನ್ನು ಖ್ಯಾತ ಸಂಗೀತ ನಿರ್ದೇಶಕ ಶ್ರೀ ವಿ. ಮನೋಹರ್ ಲೋಕಾರ್ಪಣೆ ಗೊಳಿಸಲಿದ್ದಾರೆ. ಬಹು ಭಾಷಾ ತಾರಾ ಗಾಯಕ ಡಾ. ರಮೇಶ್ಚಂದ್ರರೊಂದಿಗೆ ಹಾಡುಗಳ ಮೂಲ ಗಾಯಕರೇ ಸಂಗೀತ ರಸಮಂಜರಿಯನ್ನು ಪ್ರಸ್ತುತ ಪಡಿಸಲಿದ್ದಾರೆ.

“ಯಕ್ಷತರಂಗ ಬೆಂಗಳೂರು (ರಿ)” ಸಂಸ್ಥೆಯ ಬಾಲ ಕಲಾವಿದರಿಂದ “ಶ್ರೀ ಕೃಷ್ಣ ಲೀಲೆ-ಕಂಸ ವದೆ” ಯಕ್ಷಗಾನ ಪ್ರದರ್ಶನವಿದೆ.
ಬೆಂಗಳೂರಿನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ನಗರ”ದ ನಾಗರಿಕ ಬಂಧುಗಳು ತುಂಬು ಸಹಕಾರ ನೀಡಲಿದ್ದಾರೆ. 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ “ವಿಜಯ ಕಲಾವಿದರು ಕಿನ್ನಿಗೋಳಿ” ತಂಡವನ್ನು ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿ, ಕಲಾ ಪೋಷಕ ಶ್ರೀ ಭವಾನಿಶಂಕರ್ ಶೆಟ್ಟಿಯವರು ಸನ್ಮಾನಿಸಿ ಅಭಿನಂದಿಸಲಿದ್ದಾರೆ.

ಕಾರ್ಯಕ್ರಮಗಳಿಗೆ ಉಚಿತ ಪ್ರವೇಶವಾಗಿದ್ದು, ಸಮಸ್ತ ಕಲಾಭಿಮಾನಿಗಳಿಗೆ “ಟೀಮ್ ಐ-ಲೇಸಾ” ತುಂಬು ಹೃದಯದ ಸ್ವಾಗತ ಕೋರಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ