ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ, ಜಿಲ್ಲಾಡಳಿತದಿಂದ ತೆರವು

ಮಲ್ಪೆ : ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಸರ್ಕಾರದ ಜಾಗವನ್ನು ಯಾವುದೇ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಲ್ಲಿ ಅವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಕಲಂ 11 ರಂತೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಉಡುಪಿ ತಹಶೀಲ್ದಾರರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ – ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಜಿಲ್ಲೆಯ ಎಲ್ಲ ಹೋಮ್‌ಸ್ಟೇ, ರೆಸಾರ್ಟ್ಸ್ ಮಾಲಕರ ಸಭೆ ಕರೆದ ಜಿಲ್ಲಾಧಿಕಾರಿ