ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000 ಲೀಟರ್ ಮಾರಾಟವಾಗುತ್ತಿದ್ದು ಪ್ರಸ್ತುತ 1,10,000 ಲೀಟರ್ ಶೇಖರಣೆಯಾಗುತ್ತಿದೆ. ಕಾರಣ ನಿಯಮ ಮೀರಿ ಹೊರ ಜಿಲ್ಲೆಗಳಿಗೆ ಜಾನುವಾರು ಮಾರಾಟ ಮಾಡುತ್ತಿದ್ದು ಇದರಿಂದ ಹಾಲು ಶೇಖರಣೆ ಕಡಿಮೆಯಾಗುತ್ತಿದೆ.

ಗ್ರಾಹಕರಿಗೆ ಬೇಕಾಗುವಷ್ಟು ಹಾಲು ಮತ್ತು ಹಾಲಿನ ಉತ್ಪನ್ನ ನೀಡಲು ಸಾಧ್ಯವಾಗುತ್ತಿಲ್ಲ. ದಿನೇದಿನೇ ಹಾಲು ಶೇಖರಣೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ರಾಸುಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ನಿಯಮ ಸಡಿಲಗೊಳಿಸಬಾರದೆಂದು ಹಾಗೂ ರಾಸು ಕಳ್ಳತನವಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಲ್ಲಾಳಿಗಳು ಮನೆಮನೆಗೆ ಬಂದು ರಾಸು ಮಾರಾಟಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ತಹಶೀಲ್ದಾರರು, ಪೋಲಿಸ್ ನಿರೀಕ್ಷಕರು ಮತ್ತು ಪಶುವೈದ್ಯಾಧಿಕಾರಿಯವರು ಕಾನೂನು ಪ್ರಕಾರ ಜಾನುವಾರು ಸಾಗಾಟ ಮಾಡಲು ಅನುಮತಿಯನ್ನು ನೀಡುವಂತೆ ಬ್ರಹ್ಮಾವರ ತಾಲೂಕು ದಂಡಾಧಿಕಾರಿಗಳಿಗೆ ಸೇರಿದಂತೆ ಬ್ರಹ್ಮಾವರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್‌ರವರಿಗೆ ಮನವಿ ನೀಡಲಾಯಿತು.

ಬ್ರಹ್ಮಾವರ ಹಾಲು ನೌಕರರ ತಾಲೂಕು ಅಧ್ಯಕ್ಷ ರಾಕೇಶ್ ನಾಯಕ್ ಶಿರಿಯಾರ, ಹಂದಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸರಸ್ವತಿ ಮೊದಲಾದವರು ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್