ಬೀಜಾಡಿಯಲ್ಲಿ ಓರ್ವ ಯುವಕ ಸಮುದ್ರಪಾಲು, ಮತ್ತೋರ್ವನ ರಕ್ಷಣೆ

ಕುಂದಾಪುರ : ತಿಪಟೂರು ಮೂಲದ ಯುವಕರಿಬ್ಬರು ಸಮುದ್ರ ವಿಹಾರಕ್ಕೆ ತೆರಳಿದ್ದು ಈ ವೇಳೆ ಓರ್ವ ಅಲೆಗಳ ರಭಸಕ್ಕೆ ಸಿಕ್ಕು ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ಸಂಭವಿಸಿದೆ.

ಸಮುದ್ರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು ಬೀಜಾಡಿಯ ಸ್ನೇಹಿತನ ಮನೆಯ ಕಾರ್ಯಕ್ರಮಕ್ಕೆ ಬಂದಿದ್ದರು. ಸಂಜೆ ವೇಳೆ ಇವರಿಬ್ಬರು ಸಮುದ್ರದ ಬಳಿ ತೆರಳಿದ್ದು ನೀರಿಗಿಳಿದ ಯೋಗೀಶ್ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದು, ಆತನ ಸ್ನೇಹಿತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಂಜೆಯವರೆಗೂ ಕಾಣೆಯಾದ ಯುವಕನ ಹುಡುಕಾಟಕ್ಕೆ ಪೊಲೀಸರು, ಮೀನುಗಾರರು, ಸ್ಥಳೀಯರು ಹರಸಾಹಸಪಟ್ಟರು.

ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ