ಸಾಲಿಗ್ರಾಮದ ಐತಾಳರ ಮನೆಯಲ್ಲಿ 40 ವರ್ಷಗಳಿಂದಲೂ ಜೀವಂತ ನಾಗನಿಗೆ ಪೂಜೆ ನಡೆಯುತ್ತೆ!

ಉಡುಪಿ : ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಉರಗ ರಕ್ಷಕ ಸುಧೀಂದ್ರ ಐತಾಳರು ನಾಗರಪಂಚಮಿಯ ದಿನವಾದ ಇಂದು ಜೀವಂತ ನಾಗನಿಗೆ ಪೂಜಿ ಸಲ್ಲಿಸಿದ್ದಾರೆ. ವರ್ಷಂಪ್ರತಿ ಐತಾಳರು ಜೀವಂತ ನಾಗನಿಗೆ ಪೂಜೆ ಸಲ್ಲಿಸಿ ಸುದ್ದಿಯಲ್ಲಿರುತ್ತಾರೆ. ಹಾಗಂತ ಇದು ಇವತ್ತು ನಿನ್ನೆಯಿಂದ ನಡೆದುಕೊಂಡು ಬಂದ ಪದ್ಧತಿಯಲ್ಲ. ಐತಾಳರು ಕಳೆದ 40 ವರ್ಷಗಳಿಂದಲೂ ಉರಗ ರಕ್ಷಣೆಯ ಕಾರ್ಯ ಮಾಡುತ್ತಿದ್ದಾರೆ.

ಹಾಗೆ ನೋಡಿದರೆ ಪ್ರತಿನಿತ್ಯ ಅವರು ಜೀವಂತ ಹಾವುಗಳಿಗೆ ಪೂಜೆ ಮಾಡುತ್ತಾ ಬಂದಿದ್ದಾರೆ. ಗಾಯಗೊಂಡ ಹಾವು, ಆಶ್ರಯ ಇಲ್ಲದ ಹಾವು, ಬೇರ್ಪಟ್ಟ ಹಾವಿನ ಮರಿಗಳು, ಅಪಘಾತದಲ್ಲಿ ಗಾಯಗೊಂಡ ಹಾವು… ಹೀಗೆ ಎಲ್ಲೇ ಹಾವುಗಳು ಕಂಡರೂ ಅವರು ತಮ್ಮ ಮನೆಗೆ ತಂದು ಅದರ ಆರೈಕೆ ಮಾಡುತ್ತಾರೆ. ಕಳೆದ 40 ವರ್ಷಗಳಿಂದ ಅವರು ಇದೇ ಕಾಯಕ ಮಾಡುತ್ತಿದ್ದಾರೆ. ಹಾಗಾಗಿ ಅವರ ಮನೆಯಲ್ಲಿ ಹಾವಿಗೆ ನಿತ್ಯವೂ ಪೂಜೆ ನಡೆಯುತ್ತಿರುತ್ತದೆ. ಇವತ್ತು ನಾಗರಪಂಚಮಿಯ ಪ್ರಯುಕ್ತ ವಿಶೇಷ ರೀತಿಯಲ್ಲಿ ನಾಗರಾಧನೆ ಮಾಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ ಐತಾಳರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ