ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ : ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕುಂದಗನ್ನಡ ಭಾಷೆಯ ಅನನ್ಯತೆ ಮತ್ತು ಇಲ್ಲಿನ ಸಂಸ್ಕೃತಿಯ ಅಸ್ಮಿತೆಯನ್ನು ಉಳಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕುಂದಗನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಮತ್ತು ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಶ್ಮಿತಾ ಸ್ವಾಗತಿಸಿ, ವಿಸ್ಮಿತಾ ಅತಿಥಿಗಳನ್ನು ಪರಿಚಯಿಸಿ, ಗಗನ್ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ