ಪಳ್ಳಿ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಕಾರ್ಕಳ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಜೂ. 19ರಂದು ನಡೆಯಿತು.

ಬಹುಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ದೀಪ ಬೆಳಗಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪಳ್ಳಿ ಪೇಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಅಂಚನ್, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷ ಸುನಿಲ್ ಬಿ. ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಪ್ರಭು, ಮನೋಹರ್ ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೆಶ್ ಶೆಟ್ಟಿ, ವಿಜಯ ಎಂ. ಶೆಟ್ಟಿ ಮತ್ತು ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಹಾಗೂ ಯಕ್ಷ ಗುರು ಮಹಾವೀರ್ ಪಾಂಡಿ ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ