ಸ್ವಾತಂತ್ರ್ಯೋತ್ಸವ ಸಂಭ್ರಮ : ಕಟೀಲು ದುರ್ಗೆ, ಮಂಗಳಾಂಬೆಗೆ ‘ತಿರಂಗ’ದಲಂಕಾರ

ಮಂಗಳೂರು : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಗರಿಗೆದರಿದೆ. ಈ ಶುಭ ಸಂದರ್ಭದಲ್ಲಿ ದ.ಕ.ಜಿಲ್ಲೆಯ ದೇವತೆಯರನ್ನೂ ತ್ರಿವರ್ಣ ಧ್ವಜದ ಅಲಂಕಾರದಲ್ಲಿ ಸಿಂಗರಿಸಿ ದೇಶಪ್ರೇಮ ಮೆರೆಯಲಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಂಗಳೂರಿನ ಶ್ರೀ ಮಂಗಳಾದೇವಿಯರು ತ್ರಿವರ್ಣ ಧ್ವಜದಲಂಕಾರದಲ್ಲಿ ಕಂಗೊಳಿಸಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ತ್ರಿವರ್ಣ ಧ್ವಜದ ಸೀರೆಯನ್ನು ಉಡಿಸಲಾಗಿದ್ದು, ತ್ರಿವರ್ಣ ಧ್ವಜದ ಹೂಮಾಲೆಯ ಅಲಂಕರಿಸಿ ಸಿಂಗರಿಸಲಾಗಿದೆ.

ಅದೇ ರೀತಿ ಮಂಗಳೂರಿನ ಅಧಿದೇವತೆ ಶ್ರೀ ಮಂಗಳಾದೇವಿಗೆ ತಿರಂಗದ ಸೀರೆಯನ್ನೇ ಉಡಿಸಲಾಗಿದ್ದು, ತ್ರಿವರ್ಣ ಧ್ವಜದ ಹೂಗಳಿಂದಲೇ ಅಲಂಕಾರ ಮಾಡಲಾಗಿದೆ. ಒಟ್ಟಿನಲ್ಲಿ ದ.ಕ.ಜಿಲ್ಲೆಯ ದೇವತೆಗಳಿಗೆ ದೇಶಪ್ರೇಮ ಬೀರುವ ಅಲಂಕಾರ ಮಾಡಿದ್ದು, ಭಕ್ತರಲ್ಲೂ ದೇಶಭಕ್ತಿ ಜಾಗೃತಿ ಮೂಡಿಸುವಂತಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್