ಶ್ರೀಕೃಷ್ಣ ಮಠಕ್ಕೆ ಅಂತಾರಾಷ್ಟ್ರೀಯ ಪ್ರವಚನಕಾರ ಗೋಪಾಲದಾಸ್‌ ಗೌರ್‌ ಭೇಟಿ

ಉಡುಪಿ : ಅಂತಾರಾಷ್ಟ್ರೀಯ ಪ್ರವಚನಕಾರ, ಲೇಖಕ, ಅಧ್ಯಾತ್ಮಗುರು ಗೋಪಾಲದಾಸ್‌ ಗೌರ್‌ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾ‌ದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಅನಂತರ ಪುತ್ತಿಗೆ ಶ್ರೀಪಾದರ ಪ್ರಧಾನ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದ ಅಂಗವಾಗಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್‌ ಗೀತೋತ್ಸವದ ಪ್ರಯುಕ್ತ ಡಿಸೆಂಬರ್ 11ರಂದು ನಡೆಯಲಿರುವ ಗೀತಾ ಜಯಂತಿ ಹಾಗೂ ಸಹಸ್ರ ಕಂಠ ಗೀತಾ ಪಾರಾಯಣದ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ