ಉಡುಪಿ ಕೃಷ್ಣಮಠದ ಶ್ರೀಕೃಷ್ಣ ಜನ್ಮಾಷ್ಟಮಿಗೆ ರಾಜ್ಯಪಾಲರಿಗೆ ಆಹ್ವಾನ

ಉಡುಪಿ : ಪರ್ಯಾಯ ಪೀಠಾಧೀಶ ಸುಗುಣೇಂದ್ರ ತೀರ್ಥರು ತಮ್ಮ ಐತಿಹಾಸಿಕ 4ನೇ ಅವಧಿಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್ 1ರಿಂದ 24ರ ವರೆಗೆ ಅದ್ಧೂರಿಯಾಗಿ ಆಯೋಜಿಸಲು ಯೋಜಿಸಿದ್ದಾರೆ.

ಆ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ, “ಮಾಸೋತ್ಸವ”ದ ಸೌಹಾರ್ದಯುತ ಆಹ್ವಾನವನ್ನು ಕರ್ನಾಟಕದ ರಾಜ್ಯಪಾಲ ಘನತೆವೆತ್ತ ತಾವರಚಂದ್ ಗೆಹ್ಲೋಟ್ ಅವರಿಗೆ ಬೆಂಗಳೂರಿನ ರಾಜಭವನದಲ್ಲಿ ನೀಡಿ ಉಡುಪಿಗೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅವರಿಗೆ ಸ್ವಾಮಿಗಳ ಶ್ರೀ ಕೃಷ್ಣ ಪ್ರಸಾದ ಮತ್ತು ಅನುಗ್ರಹ ಮಂತ್ರಾಕ್ಷತೆ ನೀಡಲಾಯಿತು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ