ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯ ಕಾಂಗ್ರೆಸ್ ಸರಕಾರದ ಹೆಗ್ಗುರುತು – ಚಾಟಿ ಬೀಸಿದ ಪ್ರಹ್ಲಾದ್ ಜೋಶಿ

ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಸೇರಿ ಅನೇಕ ಸಚಿವರ ವಿರುದ್ದ ಅನೇಕ ತೀವ್ರ ಆರೋಪಗಳಿವೆ. ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯದ ಕಾಂಗ್ರೆಸ್ ಸರಕಾರದ ಹೆಗ್ಗುರುತಾಗಿದೆ. ಕಟಾಕಟ್ ಹೇಳಿದವರು ಕಟಾಕಟ್ ಆಗಿ ಹಣವನ್ನು ನುಂಗಿಕೊಳ್ಳುವುದು ಹೇಗೆ ಎಂದು ಕರ್ನಾಟಕದಲ್ಲಿ ತೋರಿಸಿಕೊಟ್ಟಿದ್ದಾರೆ. ಇದರ ವಿರುದ್ಧ ಹೋರಾಟವನ್ನು ಬಿಜೆಪಿ ಖಂಡಿತ ಮಾಡಲಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ ಬೀಸಿದರು.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಾಕಾರಣದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಪ್ರಿಯಾಂಕ ಖರ್ಗೆಯವರಷ್ಟು ದುರಹಂಕಾರದಿಂದ ವರ್ತಿಸಿರಲಿಲ್ಲ. ಆದರೆ ಪ್ರಿಯಾಂಕ ಖರ್ಗೆಗೆ ಈಗಲೇ ದುರಹಂಕಾರ ತಲೆಗೇರಿದೆ. ಅವರ ದುರಹಂಕಾರದ ವರ್ತನೆಗೆ ಜನರು ಸೂಕ್ತ ಉತ್ತರ ಕೊಡಲಿದ್ದಾರೆ. ಅವರ ದುರ್ವತನೆಯ ಕಾರಣದಿಂದಲೇ ಮಲ್ಲಿಕಾರ್ಜುನ ಖರ್ಗೆಯವರು 2019ರಲ್ಲಿ ಸೋತಿರುವುದನ್ನು ಅವರು ನೆನಪಿಟ್ಟುಕೊಳ್ಳಲಿ.

ಪ್ರಿಯಾಂಕ್ ಖರ್ಗೆಯವರು ಸಾರ್ವಜನಿಕ ಬದುಕಿನ ಎಲ್ಲಾ ಮಟ್ಟವನ್ನು ಮೀರಿದವರು. ಅವರು ಎಷ್ಟು ಕೆಳಗಿಳಿಯಲು ಬೇಕಾದರೂ ಸಿದ್ಧರಿದ್ದಾರೆ. ಆದ್ದರಿಂದ ಪ್ರಿಯಾಂಕ್ ಖರ್ಗೆಯವರು ರಾಜಿನಾಮೆ ಕೊಡುತ್ತಾರೆ ಎಂಬ ನಿರೀಕ್ಷೆ ನಮಗಿಲ್ಲ. ಆದ್ದರಿಂದ ಜನರನ್ನು ಜಾಗೃತಿ ಮಾಡಲು ನಾವು ಹೋರಾಟ ಮುಂದುವರೆಸುತ್ತೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬುದರ ಬಗ್ಗೆ ನಾನು ಹೇಳಲ್ಲ. ಆದರೆ ದೇಶಾದ್ಯಂತ ಪ್ರತೀ ಮಂಡಲ, ಬೂತ್, ಜಿಲ್ಲಾಧ್ಯಕ್ಷ, ರಾಜ್ಯಾಧ್ಯಕ್ಷ, ರಾಷ್ಟ್ರಾಧ್ಯಕ್ಷ ಬದಲಾವಣೆಗೆ ಪ್ರೋಸೆಸ್ ನಡೆಯುತ್ತಿದೆ. ಅದರಲ್ಲಿ ಇದ್ದವರೇ ಮತ್ತೊಮ್ಮೆ ಆಯ್ಕೆ ಆಗಬಹುದು. ನಾಲ್ಕೈದು ತಿಂಗಳ ಹಿಂದೆ ಕೆಲವು ಕಡೆಗಳಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ನಡೆದಿದೆ. ಸದ್ಯ ಬೂತ್ ಅಧ್ಯಕ್ಷರ ಚುನಾವಣೆ ಆಗಿದೆ, ಇನ್ನು ಮಂಡಲಾಧ್ಯಕ್ಷರ ಚುನಾವಣೆ ಆಗಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar