ಪಡೀಲ್ ಅಂಡರ್ ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಕೆಎಸ್ಆರ್‌ಟಿಸಿ ಬಸ್

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್‌ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಈ ನಡುವೆ ಮಂಗಳೂರಿನ ಪಡೀಲ್ ರೈಲ್ವೇ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದು ಈ ನೀರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಒಂದು ಸಿಕ್ಕಿಹಾಕಿಕೊಂಡಿದೆ.

ನೀರು ನಿಂತಿದ್ದರೂ ಬಸ್ ಚಾಲಕ ನೀರಿನಲ್ಲೇ ಬಸ್‌ನ್ನು ಓಡಿಸಿದ್ದಾನೆ. ಈ ವೇಳೆ ಬಸ್ಸಿನೊಳಗೆ ನೀರು ನುಗ್ಗಿ ತಾಂತ್ರಿಕ ದೋಷದಿಂದ ನೀರು ಮಧ್ಯೆದಲ್ಲೇ ಬಸ್ ಬಾಕಿಯಾಗಿದೆ. ಬಸ್‌ನೊಳಗಿದ್ದ ಪ್ರಯಾಣಿಕರು ಇಳಿಯಲಾಗದೆ ಬಸ್‌ನಲ್ಲೇ ಪರದಾಟ ಪರಿಸ್ಥಿತಿ ಉಂಟಾಗಿತ್ತು. ಮಂಗಳೂರು ನಗರದಿಂದ ಪಡೀಲ್, ಬಜಾಲ್, ಜಲ್ಲಿಗುಡ್ಡೆ ಪ್ರದೇಶಕ್ಕೆ ತೆರಳುವ ಬಸ್‌ಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತದೆ.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours