ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ – ಸಂಸದ ಯದುವೀರ್

ಉಡುಪಿ : ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಪ್ರದೇಶವಾಗಿದ್ದು, ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿ ಎಂಬುದಾಗಿ ನಾವು ನಂಬುತ್ತೇವೆ. ಆದುದರಿಂದ ನಮ್ಮ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ ಎಂದು ಮೈಸೂರು ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಜವಾಬ್ದಾರಿಯುತ ಜನಪ್ರತಿನಿಧಿಗಳಾಗಿ ಸಂವಿಧಾನ ದೃಷ್ಠಿಯಲ್ಲಿ ತಮ್ಮ ತಮ್ಮ ಮನೆಗಳಲ್ಲಿ ಏನು ಬೇಕಾದರೂ ಆಚರಣೆ, ಉತ್ಸವ ಮಾಡಬಹುದು ಎಂಬುದಾಗಿ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿಯೂ ಸರಕಾರದ ಅನುಮತಿ ಪಡೆದು ಆಚರಣೆಯನ್ನು ಮಾಡಬಹುದಾಗಿದೆ ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್‌ ಆದೇಶ ಬಂದಿರುವುದರಿಂದ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಲಿ. ತನಿಖೆಯಲ್ಲಿ ಯಾವ ರೀತಿ ವರದಿ ಬರುತ್ತದೆಯೋ ಆ ರೀತಿ ಅವರು ಮುಂದುವರೆಯಲಿ ಎಂದು ಸಂಸದ ಯದುವೀ‌ರ್ ಹೇಳಿದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ