ಬೈಂದೂರು ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ

ಬೈಂದೂರು : ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ್‌ರನ್ನು ಬಲೆಗೆ ಕೆಡವಿದ್ದಾರೆ. ಆರೋಪಿಗಳ ಪೈಕಿ ಬಂಗಾರಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆಯಾಗಿದ್ದಾನೆ.

ಇವರಿಬ್ಬರು ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡುವುದಕ್ಕಾಗಿ 4000 ರೂ. ಲಂಚ ಕೇಳಿದ್ದರು. ಮರ ತೆರವು ಮಾಡಲು ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಡಿವೈಎಸ್ಪಿ ಪ್ರಕಾಶ್ ಕೆ ಸಿ, ಮತ್ತು ಪೊಲೀಸ್ ನಿರೀಕ್ಷಕ ಮಂಜುನಾಥ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ