ಕೇಸರಿ ಬಟ್ಟೆಯ ಕೊಲಾಜ್‌ನಲ್ಲಿ ಮೂಡಿ ಬಂದ ಶ್ರೀ ರಾಮ

ಕಾರ್ಕಳ : ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಹಾಗೂ ಕರಾವಳಿ ಯೂತ್ ಕ್ಲಬ್ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿದ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ ಕಲಾಕೃತಿಯು ಅನಾವರಣಗೊಂಡಿತು.

ತುಳು ರಂಗಭೂಮಿಯ ಖ್ಯಾತ ಕಲಾವಿದ, ನಿರ್ದೇಶಕ ಪ್ರಸನ್ನ ಶೆಟ್ಟಿ ಬೈಲೂರು ಮತ್ತಿತರರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಪುಷ್ಪಾರ್ಚನೆಗೈದರು.

ವಿದ್ಯಾರ್ಥಿಗಳಾದ ಹಿಮಾನಿ ಡಿ. ಶೆಟ್ಟಿ, ಪ್ರಥ್ವಿಜ್ ಶೆಟ್ಟಿ, ತೇಜಸ್ ದೇವಾಡಿಗ, ಸಾಕ್ಷಿತ್ ಶೆಟ್ಟಿ, ಸದ್ವಿನ್ ಶೆಟ್ಟಿ, ಸ್ಪರ್ಶ್ ಪೂಜಾರಿ ಮುಂತಾದವರು ಹಿರಿಯ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ಈ ಆಕರ್ಷಕ ಕಲಾಕೃತಿಯನ್ನು ರಚಿಸಿದ್ದು ಎಲ್ಲರ ಗಮನ ಸೆಳೆದಿದೆ.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ