ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ – ಲಕ್ಷಾಂತರ ರೂ. ವಂಚನೆ

ಉಡುಪಿ : ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.

ಬೈಲಕೆರೆಯ ಕೆ. ಗುರುಪ್ರಸಾದ್‌ ಎಂಬವರ ವಾಟ್ಸಾಪ್‌ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ ಪಡೆಯಬಹುದು ಎಂಬ ಆಮಿಷ ಒಡ್ಡಲಾಗಿತ್ತು. ಅದನ್ನು ನಂಬಿದ ಅವರು ಹಂತಹಂತವಾಗಿ 1,00,000 ರೂ.ಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಅಪರಿಚಿತ ಆರೋಪಿಯು ಹಣ ಹಿಂದಿರುಗಿಸದೆ ವಂಚನೆ ಎಸಗಿದ್ದಾಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ