ಗುಂಡಿಬೈಲಿನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣುಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಗುಂಡಿಬೈಲು ಮಾದವ ಪೂಜಾರಿ (58ವ) ಎಂದು ಗುರುತಿಸಲಾಗಿದೆ.

ಮಾದವ ಪೂಜಾರಿಯವರು ಮರದ ಮಿಲ್ಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ.

ನಗರ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳದಲ್ಲಿಗೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಶವ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ