ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಸಾಮೂಹಿಕ ಪ್ರಾರ್ಥನೆ

ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ, ಕ್ಷೇತ್ರಕ್ಕೆ ಬಂದು ಕ್ಷಮೆ ಕೇಳುವಂತೆ ದೇವರು ಮತ್ತು ಗುರುಗಳ ಪಾದ ಕಮಲಗಳಲ್ಲಿ ಬಿದ್ದು ಕ್ಷಮೆ ಕೇಳುವಂತೆ ಸಾಮೂಹಿಕ ಪ್ರಾರ್ಥನೆ ಹಿಂದು ಜಾಗರಣ ವೇದಿಕೆ, ಮಂಗಳೂರು ಮಹಾ ನಗರದ ವತಿಯಿಂದ ನೆರವೇರಿಸಲಾಯಿತು.

ಈ ಸಂದರ್ಭ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ಲಿಖಿತ್ ರಾಜ್ ಮೂಡುಶೆಡ್ಡೆ, ಸಹ ಸಂಯೋಜಕರುಗಳಾದ ಗಣೇಶ್ ಕೆದಿಲ, ನವೀನ್ ಮಂಗಳಾದೇವಿ, ಕಾರ್ಯಕಾರಣಿ ಸದಸ್ಯರುಗಳಾದ ಹರ್ಷಿತ್ ಶಕ್ತಿನಗರ, ಪ್ರಜ್ವಲ್ ಶಕ್ತಿನಗರ, ಸುಷಿತ್ ಬೋಳಾರ, ಹೇಮಂತೇಶ್ ಗೌಡ, ಸುವಿನ್ ಶೆಟ್ಟಿ, ಸುರತ್ಕಲ್ ನಗರ ಸಂಯೋಜಕರಾದ ಕಿರಣ್ ಜನತಾ ಕಾಲನಿ, ಶಕ್ತಿನಗರ ಮುಖಂಡರು ಮಣಿ ಶಕ್ತಿನಗರ, ಪ್ರಕೇಶ್ ಶಕ್ತಿನಗರ, ಪ್ರವೀಣ್ ಮತ್ತು ಸಂಘ ಪರಿವಾರದ ಮುಖಂಡರು, ಭಜನಾ ಸಮಿತಿ, ವಿವಿಧ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ