ಏಕಕಾಲದಲ್ಲಿ 101 ಮಂದಿ ಕಲಾವಿದರಿಂದ ಸಾಮೂಹಿಕ ವೀಣಾ ವಾದನ

ಉಡುಪಿ : ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ, ಅಪರೂಪದ ಕಾರ್ಯಕ್ರಮ ನಡೆಯಿತು. ಏಕಕಾಲದಲ್ಲಿ 101 ಮಂದಿ ಕಲಾವಿದರು ಸಾಮೂಹಿಕವಾಗಿ ವೀಣೆ ನುಡಿಸುವ ಮೂಲಕ ಕೇಳುಗರನ್ನು ರೋಮಾಂಚನಗೊಳಿಸಿದರು. ದೇವರಸ್ತುತಿಗಳನ್ನು ಶೃತಿಬದ್ಧವಾಗಿ ಕೇಳುವ ಅಪೂರ್ವ ಅವಕಾಶ ಭಕ್ತರಿಗೆ ಸಿಕ್ಕಿತು.

ವಿದ್ವಾನ್ ಪವನಾ ಆಚಾರ್ಯ ಅವರ ನೇತೃತ್ವದ ತಂಡ ಎರಡು ಗಂಟೆಗಳಿಗೂ ಅಧಿಕಕಾಲ ಈ ಅಪೂರ್ವ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಉಚ್ಚಿಲ ದಸರಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ನಿಟ್ಟಿನಲ್ಲಿ, ವರ್ಷಂ ಪ್ರತಿ ಈ ಸಾಮೂಹಿಕ ವೀಣಾ ವಾದನ ಕಾರ್ಯಕ್ರಮ ನಡೆಸಲಾಗುತ್ತದೆ. ಏಕಕಾಲದಲ್ಲಿ 101 ವೀಣೆಗಳ ಜೇಂಕಾರ ಕೇಳುವುದೇ ಒಂದು ಅಪೂರ್ವ ಅನುಭವವಾಗಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ