ಪಡುಬಿದ್ರಿ – ಕಾರ್ಕಳ ರಸ್ತೆಯ ಕಂಚಿನಡ್ಕ ಬಳಿ ಟೋಲ್ ಗೇಟ್ ನಿರ್ಮಾಣ ವಿರೋಧಿಸಿ ಬೃಹತ್ ಜನಾಂದೋಲನ

ಪಡುಬಿದ್ರಿ : ಪಡುಬಿದ್ರಿ – ಕಾರ್ಕಳ ರಸ್ತೆಯ ಕಂಚಿನಡ್ಕ ಬಳಿ ಟೋಲ್ ಗೇಟ್ ನಿರ್ಮಾಣ ವಿರೋಧಿಸಿ ಪಡುಬಿದ್ರಿ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಬೃಹತ್ “ಜನಾಂದೋಲನ ಸಭೆ” ನಡೆಯಿರು. ಸಭೆಯಲ್ಲಿ ಸ್ಥಳೀಯರ ಜೊತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಿದರು.

ಶಾಸಕರು ಮಾತನಾಡಿ, ಸ್ಥಳೀಯರಿಗೆ ಸಮಸ್ಯೆ ಆಗುವಂತಹ ಟೋಲ್ ಗೇಟ್ ನಮಗೆ ಬೇಡವೇ ಬೇಡ. ಟೋಲ್ ಗೇಟ್ ನಿರ್ಮಾಣ ವಿರೋಧಿಸಿ ನಡೆಯುವ ಹೋರಾಟದಲ್ಲಿ ಜಾತಿ, ಧರ್ಮ, ಪಕ್ಷಬೇಧ ಮರೆತು ನಾವೆಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕು. ಈ ಹೋರಾಟಕ್ಕೆ ಶಾಸಕನಾಗಿ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ