ಪಡುಬಿದ್ರಿಯಲ್ಲಿ ಮಟ್ಕಾ ದಾಳಿ, ಇಬ್ಬರು ಆರೋಪಿಗಳ ಬಂಧನ

ಪಡುಬಿದ್ರಿ : ಇಲ್ಲಿನ ಮಾರ್ಕೆಟ್‌ ಪ್ರದೇಶದ ತರಕಾರಿ ಅಂಗಡಿಯೊಂದರ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿಗಳನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ನೇತೃತ್ವದ ತಂಡ ಇಂದು ಬಂಧಿಸಿದೆ.

ಚಂದ್ರ ಅವರಾಲು ಮಟ್ಟು ಹಾಗೂ ಮುರಳೀಧರ ಸಾಲ್ಯಾನ್‌ ಪಡಹಿತ್ಲು ಬಂಧಿತ ಆರೋಪಿಗಳು. ಬಂಧಿತರಿಂದ 1,835 ರೂ. ನಗದು, ಮಟ್ಕಾ ಚೀಟಿಗಳು, ಟೇಬಲ್‌ ಹಾಗೂ ಎರಡು ಕುರ್ಚಿಗಳ ಸಹಿತ 2 ಮೊಬೈಲ್‌ ಮತ್ತಿತರ ಪರಿಕರಗಳನ್ನು ವಶಪಡಿಕೊಳ್ಳಲಾಗಿದೆ.

ಇವರಿಂದ ಹಣ ಸಂಗ್ರಹಿಸುತ್ತಿದ್ದ ನಿರ್ವಾಹಕ ಏಜೆಂಟ್‌ ಎರ್ಮಾಳಿನ ಮನೋಜ್‌ ಕೋಟ್ಯಾನ್‌ನನ್ನು ಪ್ರಕರಣದಲ್ಲಿ ಆರೋಪಿಯಾಗಿಸಿ ಮೂವರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೊಪಿಗಳಿಬ್ಬರನ್ನೂ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ