ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಸಭೆ

ಉಡುಪಿ : ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕನ್‌ಗುನ್ಯ ಹಾಗೂ ಇತರ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆಯು ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು.

ಕೆಲಸಗಳಿಗೆ ಹೊರ ಜಿಲ್ಲೆ ಹಾಗೂ ಇತರ ಕಡೆಗಳಿಂದ ಬರುವ ಕಾರ್ಮಿಕರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಅದರ ಮಾಹಿತಿಯನ್ನು ಜಿಲ್ಲಾಸ್ಪತ್ರೆಗೆ ನೀಡಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ ರೋಗ ಹರಡುವಿಕೆಗೆ ಕಾರಣವಾಗುವ ಅಂಶಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು ಎಂದರು.

ಸಭೆಯಲ್ಲಿ ಪೌರಾಯುಕ್ತ ರಾಯಪ್ಪ ಮಾತನಾಡಿ, ಯಾವುದೇ ಪ್ರದೇಶದಲ್ಲಿ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕನ್‌ಗುನ್ಯ ಪ್ರಕರಣಗಳು ಹೆಚ್ಚು ಕಂಡುಬಂದಲ್ಲಿ ಇಂತಹ ಘಟನೆಗೆ ಕಾರಣವಾದ ಬಿಲ್ಡರ್ಸ್‌ಗಳ ಪರವಾನಿಗೆ‌ಯನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚನೆ ನೀಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ