ಹೊಳೆಯಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಸಮಸ್ಯೆ ಬಗೆಹರಿಸಿದ ಮೆಸ್ಕಾಂ ಸಿಬ್ಬಂದಿ; ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ

ಹೆಬ್ರಿ : ಹೊಳೆಯಲ್ಲಿ ಈಜಿಕೊಂಡು ಹೋಗಿ ಗ್ರಾಮಸ್ಥರ ವಿದ್ಯುತ್ ಸಮಸ್ಯೆ ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೆಬ್ರಿ ಶಾಖೆಯ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಅವರಿಗೆ, ಹೆಬ್ರಿ ತಾಲೂಕಿನ ಶಿವಪುರ ಮೂಡ್ಸಾಲಿನಿಂದ ಕರೆ ಬಂದಿತ್ತು. ತಮ್ಮ ಏರಿಯಾದಲ್ಲಿ ವಿದ್ಯುತ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಸ್ಥಳೀಯರು ದೂರು ನೀಡಿದ್ದರು. ಆದರೆ ಅಲ್ಲಿಗೆ ಹೋಗಬೇಕಿದ್ದರೆ ಹೊಳೆ ದಾಟಲೇಬೇಕುತ್ತು. ಊರವರ ಸಮಸ್ಯೆ ಅರಿತ ಸಿಬ್ಬಂದಿ ಪ್ರಮೋದ್ ಈಜಿಕೊಂಡೇ ಹೊಳೆ ದಾಟಿ ಹೋಗಿ ದುರಸ್ತಿ ಕಾರ್ಯ ಮಾಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಮಸ್ಯೆ ಬಗೆಹರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಮೋದ್ ನಡೆಗೆ ಸ್ಥಳೀಯರು ಭಾರೀ ಮೆಚ್ಚುಗೆ ಸೂಚಿಸಿದ್ದಾರೆ.

ಹೊಳೆ ದಾಟಿ ಬಂದ ಸಿಬ್ಬಂದಿಯ ವೀಡಿಯೋ ಸೆರೆ ಹಿಡಿದ ಸ್ಥಳೀಯರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ