ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ- ಸಿಎಂ ರಾಜೀನಾಮೆ ನೀಡಬೇಕು – ಸುನಿಲ್ ಕುಮಾರ್

ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು. ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ ಸಿಬಿಐ ಪ್ರವೇಶವಾಗುತ್ತಿದ್ದಂತೆ ನಾಗೇಂದ್ರ ರಾಜೀನಾಮೆ ಪಡೆದುಕೊಂಡಿದ್ದಾರೆ. ಹಾಗಾದರೆ ಇಷ್ಟು ದಿನಗಳ ಕಾಲ ಈ ರಕ್ಷಣೆಯ ನಾಟಕ ಮಾಡಿದ್ದು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯವಲ್ಲವೇ?

ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ಖಂಡಿಸಿ ಸದನದ ಒಳ ಹೊರಗೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಕಚೇರಿಯ ನೇರ ಪಾಲ್ಗೊಳ್ಳುವಿಕೆ ಇದೆ ಎಂಬುದು ನಮ್ಮ ನೇರ ಆರೋಪ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ