ರಸ್ತೆಗೆ ಮೋರಿ ಅಡ್ಡವಾಗಿಟ್ಟ ಕಿಡಿಗೇಡಿಗಳು; ಮೋರಿಗೆ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ

ಉಪ್ಪಿನಂಗಡಿ : ಶಿವರಾತ್ರಿ ದಿನವಾದ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ಇದ್ದ ಬೃಹತ್ ಗಾತ್ರದ ಸಿಮೆಂಟ್ ಮೋರಿಯೊಂದನ್ನು ಕಿಡಿಗೇಡಿಗಳು ರಸ್ತೆಗೆ ಅಡ್ಡವಾಗಿ ಇರಿಸಿದ್ದು, ಮುಂಜಾನೆ ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಇದರ ಅರಿವಾಗದೆ ಬೈಕ್ ನೇರವಾಗಿ ಮೋರಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಿರೇಬಂಡಾಡಿಯಲ್ಲಿ ನಡೆದಿದೆ.

ರಸ್ತೆಯಲ್ಲಿ ಅಡ್ಡವಾಗಿ ಇರಿಸಿದ್ದ ಮೋರಿಗೆ ಢಿಕ್ಕಿಯಾಗಿ ಗಾಯಗೊಂಡಿರುವ ವ್ಯಕ್ತಿ ಹಿರೇಬಂಡಾಡಿ ಗ್ರಾಮದ ಸರೋಳಿ ನಿವಾಸಿ, ಪತ್ರಿಕಾ ವಿತರಕ ರೋಹಿತಾಕ್ಷ ಎಂದು ಗುರುತಿಸಲಾಗಿದೆ.

ಮೋರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ರೋಹಿತಾಕ್ಷ ಅವರ ಕೈ, ಕಾಲು, ಬುಜಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ರಿಕೆ ವಿತರಕರಾಗಿರುವ ರೋಹಿತಾಕ್ಷ ಎಂದಿನಂತೆ ಬೆಳಗ್ಗೆ 5 ಗಂಟೆಯ ಹೊತ್ತಿಗೆ ತನ್ನ ಮನೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದಾಗ ಹಿರೇಬಂಡಾಡಿ ಗ್ರಾಮದ ಪಟಾರ್ತಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಬದಿ ಇದ್ದ ಬೃಹತ್ ಸಿಮೆಂಟ್ ಮೋರಿಯನ್ನು ರಸ್ತೆಗೆ ಅಡ್ಡವಾಗಿ ಇರಿಸಿದ್ದು, ಇದು ಅವರ ಅರಿವಿಗೆ ಬಾರದೆ ಬೈಕ್ ನೇರವಾಗಿ ಮೋರಿಗೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ