ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಉಪಾಧ್ಯಕ್ಷರಾದ ಉಷಾ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಿ ಆಚಾರ್ಯ, ಹರೀಶ್ ಬೆಳ್ಳಿಬೆಟ್ಟು, ದಯಾನಂದ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸ್ಥಳೀಯ ಪ್ರಮುಖರಾದ ನಾಗೇಶ್ ಭಟ್, ಹರೀಶ್ ಶೆಟ್ಟಿ ಅದಮಾರು, ಸುಕೇಶ್ ಉಳ್ಳೂರು, ಗಣೇಶ್, ಕೃಷ್ಣಾನಂದ ರಾವ್, ಪ್ರೇಮಾನಂದ ಶೆಟ್ಟಿ, ಸಂದೇಶ್ ಪಾದೆಬೆಟ್ಟು, ಪಶು ವೈದ್ಯಾಧಿಕಾರಿಗಳಾದ ಅರುಣ್, ನಿರ್ಮಿತಿ ಕೇಂದ್ರದ ಮುಖೇಶ್, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ