Wednesday, March 19, 2025
Banner
Banner
Banner
Home » ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

by NewsDesk

ಉಡುಪಿ : ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್ ರವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.

ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು, ಕಳೆದ ಹಲವಾರು ತಿಂಗಳಿನಿಂದ ಪೂರ್ಣಕಾಲಿಕ ಪೌರಾಯುಕ್ತರಿಲ್ಲದೆ ನಗರಸಭೆಯ ಆಡಳಿತಾತ್ಮಕ ಕಾರ್ಯಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸೇವೆಗಳಿಗೆ ಸಮಸ್ಯೆಯಾಗುತ್ತಿರುವುದರಿಂದ ಪೂರ್ಣಕಾಲಿಕ ಪೌರಾಯುಕ್ತರನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ನಗರಸಭೆಯ ನೀರು ಸರಬರಾಜು ಅನುದಾನದಲ್ಲಿ ಲಭ್ಯವಿರುವ ನಿಧಿಯನ್ನು ಸಾಮಾನ್ಯ ನಿಧಿಯಾಗಿ ಸಿವಿಲ್ ಕಾಮಗಾರಿಗಳಿಗೆ ಬಳಸಲು ಸಲ್ಲಿಸಿದ ಪ್ರಸ್ತಾವನೆಗೆ ಶೀಘ್ರಅನುಮೋದನೆ, ನಗರಸಭೆಯ ನೂತನ ಕಛೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಹಾಗೂ ಉಡುಪಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖೆಯ ಮೂಲಕ ವಿಶೇಷ ಅನುದಾನ ಒದಗಿಸಿ ಸಹಕಾರ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಸಚಿವರಿಗೆ ಕೋರಿದರು.

ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ನೇಮಕ ಹಾಗೂ ಅನುದಾನ ಬೇಡಿಕೆಯ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb