ವಿಧಾನಸೌಧ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ, ಸಮಾಜದಲ್ಲಿ ಜಾತಿ ಮತ ಭೇದವನ್ನು ವಿರೋಧಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಸರ್ವರಿಗೂ ಸಾರ್ವಕಾಲಿಕ ಅದರ್ಶವಾಗಿದೆ.

ಶಿಕ್ಷಣ, ಉದ್ಯೋಗ ಮತ್ತು ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಯ ಆಶಯ ಹೊತ್ತು, ದಮನಿತ ಸಮುದಾಯಗಳ ಧ್ವನಿಯಾಗಿ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಇಂದಿನ ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿವಿಧ ದಾರ್ಶನಿಕ ಮಹನೀಯರ ಪುತ್ಥಳಿಯ ಜೊತೆ ವಿಧಾನಸೌಧದಲ್ಲಿ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸಿ ಗೌರವ ಸಲ್ಲಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ