ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ಪರಿಶೀಲನೆ..!!

ಉಡುಪಿ : ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದಿತ್ಯವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು, ಒಣ ಮೀನು ಮಾರಾಟಗಾರರಿಗೆ ಸೂಕ್ತ ಶೆಡ್ ನಿರ್ಮಾಣ, ಅಪಾಯಕಾರಿ ಮರಗಳ ತೆರವು, ಮಾರುಕಟ್ಟೆ ಪರಿಸರದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವ ಸಂತೆ ಮಾರುಕಟ್ಟೆಯಿಂದ ರಾಷ್ಟೀಯ ಹೆದ್ದಾರಿ ಸಂಪರ್ಕ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಬಗ್ಗೆ ಸ್ಥಳೀಯರ ಅಭಿಪ್ರಾಯ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಮತಿ ಮಂಜುಳಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಹರೀಶ್ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಾಗರಾಜ ಕುಂದರ್, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕೃಷ್ಣ ದೇವಾಡಿಗ, ಶ್ರೀ ಸತೀಶ್ ನಾಯ್ಕ್, ಶ್ರೀ ನವೀನ್ ಕಾಂಚನ್, ಶ್ರೀಮತಿ ಕವಿತಾ, ಪಕ್ಷದ ಪ್ರಮುಖರಾದ ಶ್ರೀ ಉಮೇಶ್ ಶೆಟ್ಟಿ, ಶ್ರೀ ಪ್ರಶಾಂತ್ ಕಾಂಚನ್ ಬೆಂಗ್ರೆ, ಶ್ರೀ ಪ್ರಸಾದ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ