ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ

ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಸಮಾಲೋಚನೆ ನಡೆಸಿ ಅತೀ ಶೀಘ್ರದಲ್ಲೇ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಶ್ರೀಮತಿ ಅನಿತಾ, ಹಿರಿಯ ಇಂಜಿನಿಯರ್ ಶ್ರೀ ರಮೇಶ್ ರಾವ್, ಶ್ರೀ ರಾಜೇಂದ್ರ ಮಯ್ಯ, ಸ್ಥಳೀಯ ಮುಖಂಡರಾದ ಶ್ರೀ ಪ್ರಶಾಂತ್ ಭಟ್, ಶ್ರೀ ಶಂಕರ ಕುಲಾಲ್, ಶ್ರೀ ಡೆನೀಸ್ ಪೆರಂಪಳ್ಳಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ