ಕಾಪು ಅಮ್ಮನಿಗೆ ಮುಸಲ್ಮಾನರಿಂದ ಹೊರೆ ಕಾಣಿಕೆ : ಸೌಹಾರ್ದ ಸಂದೇಶ

ಕಾಪು : ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಧೂರಿಯಾಗಿ ಬ್ರಹ್ಮ ಕಲಶೋತ್ಸವ ನಡೆಯುತ್ತಿದೆ. ಹತ್ತು ದಿನಗಳ ಕಾಲ ನಡೆಯುವ ಈ ಮಹೋತ್ಸವದ ವೇಳೆ ಪ್ರತಿದಿನ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಅನ್ನ ಸಂತರ್ಪಣೆಗೆಂದು ಹೊರೆ ಕಾಣಿಕೆಯನ್ನು ಭಕ್ತರು ನೀಡುತ್ತಿದ್ದಾರೆ. ಇದೀಗ ಎಲ್ಲಾ ಸಮುದಾಯಗಳ ಜೊತೆಗೆ ಮುಸ್ಲಿಮರು ಕೂಡ ಹೊರೆ ಕಾಣಿಕೆ ಸಮರ್ಪಿಸಿದ್ದಾರೆ. ಕಾಪು ತಾಲೂಕಿನಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಸಮುದಾಯದವರು, ಈ ಮೂಲಕ ಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಮುಸ್ಲಿಂ ಸಮುದಾಯದವರು ಹೊರೆ ಕಾಣಿಕೆ ನೀಡುವ ಮೂಲಕ, ಹೊಸ ಸೌಹಾರ್ದದ ಸಂದೇಶ ಸಾರಿದ್ದಾರೆ. ಅಂದಾಜು 30 ಕೋಟಿ ವೆಚ್ಚದಲ್ಲಿ ಕಾಪು ಹೊಸ ಮಾರಿಗುಡಿಯ ಮೊದಲ ಹಂತದ ದೇವಾಲಯ ಅಭಿವೃದ್ಧಿ ಕಾರ್ಯ ನಡೆದಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ