ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ನಿಧನ

ಹಿರಿಯಡಕ : ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕುದಿ ವಸಂತ ಶೆಟ್ಟಿಯವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ.

ಉತ್ತಮ ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿಯವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಮಾಡಿದ್ದಾರೆ. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್