ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನಾಚರಣೆ

ಉಡುಪಿ : ಆದರ್ಶ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಲೆವೂರು ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನ ಆಚರಿಸಲಾಯಿತು.

ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿದ್ದರು.

ಪೌಷ್ಟಿಕ ಆಹಾರದ ಮಹತ್ವ, ಅದರಲ್ಲಿರುವ ಪೋಷಕಾಂಶಗಳು ಮತ್ತು ಅವು ದೇಹ ಬೆಳವಣಿಗೆಗೆ ಹೇಗೆ ಸಹಕಾರಿಯಾಗಬಲ್ಲವು ಎನ್ನುವ ಕುರಿತು ವಿದ್ಯಾರ್ಥಿಗಳು ಮಾಹಿತಿ ನೀಡಿದರು.

ಕಾಲೇಜಿನ ಆಡಳಿತಾಧಿಕಾರಿಯಾದ ಡಾ. ಪ್ರಶಾಂತ್ ಪಿ. ಆದರ್ಶ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ. ರಂಜಿತಾ ಎಸ್ ನಾಯಕ್ ಅವರು ವಿದ್ಯಾರ್ಥಿಗಳು ತಯಾರಿಸಿದ ತಿನಿಸುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲೆ ಸುಧೀನಾ, ಕಾಲೇಜಿನ ಉಪ ಪ್ರಾಂಶುಪಾಲೆ ಯಶೋಧ ಸಾಲ್ಯಾನ್, ಶ್ರೀ ಆದರ್ಶ ಪ್ಯಾರಾ ಮೆಡಿಕಲ್ ಕಾಲೇಜ್ ಹಾಗೂ ಹೆಲ್ತ್ ಸೈನ್ಸ್‌ನ ಪ್ರಾಂಶುಪಾಲರಾದ ಡಾ. ರವಿ ಕುಮಾರ್ ಟಿ. ಎನ್ ಅಧ್ಯಾಪಕರಾದ ವಿನಯ, ಶೀತಲ್, ಕೃಪಾ, ದಿವ್ಯಾಶೆಟ್ಟಿ, ವಿಜಯಲಕ್ಷ್ಮಿ, ಭಾರತಿ, ಪಥ್ಯಹಾರ ತಜ್ಞೆಯಾದ ಅನುಶ್ರೀ ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್